ಕಾಂಗ್ರೆಸ್ ಗೆ ನಿರಂಜನ ಅಷ್ಟೂರೆ ಸೇರ್ಪಡೆ

ಬೀದರ್: ಮಾಜಿ ಸಚಿವ ಸುಭಾಷ ಅಷ್ಟೂರೆ ಅವರ ಸಹೋದರನ ಮಗ ನಿರಂಜನ ಅಷ್ಟೂರೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಬುಧವಾರ ಭಾಲ್ಕಿ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದ ನಿರಂಜನ ಅಷ್ಟೂರೆ ಅವರಿಗೆ ಪಕ್ಷದ ಧ್ವಜ ನೀಡಿ ಕಾಂಗ್ರೆಸ್ ನ ಲೋಕಸಭಾ ಅಭ್ಯರ್ಥಿ ಈಶ್ವರ ಖಂಡ್ರೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಈಶ್ವರ ಖಂಡ್ರೆ, ಬರುವ ದಿನಗಳಲ್ಲಿ ಇನ್ನೂ ವಿವಿಧ ಪಕ್ಷದ ಹಲವು ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.

ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಬಿಜೆಪಿ, ಜೆಡಿಎಸ್ ನ ಹಲವು ಮುಖಂಡರು ಸ್ವ ಇಚ್ಛೆಯಿಂದ ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಪಕ್ಷದ ತತ್ವ ಸಿದ್ಧಾಂತ ನಂಬಿ ಬರುವವರೆಗೆ ಸ್ವಾಗತ ಎಂದು ಹೇಳಿದರು.

ಈ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಸೋಲು ಗ್ಯಾರಂಟಿ. ಅಹಂನಿಂದ ಮೆರೆಯುತ್ತಿರುವ ಖೂಬಾ ಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಮುಖಂಡರಾದ ಪ್ರಕಾಶ ಮಾಶೆಟ್ಟಿ, ಶಶಿಧರ ಕೊಸಂಬೆ ಇತರರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ