ಕೈಗೆ ಪೆಟ್ಟಾದ ಹಿನ್ನಲೆ ಪ್ರಚಾರದಿಂದ ದೂರ ಉಳಿದ ನಿಖಿಲ್ ಕುಮಾರಸ್ವಾಮಿ

ಮಂಡ್ಯ, ಏ.12-ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅಭ್ಯರ್ಥಿ ನಿಖಿಲ್ ಅವರ ಕೈಗೆ ಪೆಟ್ಟಾಗಿದ್ದರಿಂದ ಅವರು ಇಂದು ಪ್ರಚಾರದಿಂದ ದೂರ ಉಳಿದಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಇಂದು ನಿಖಿಲ್ ಅವರು ವಿಶ್ರಾಂತಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಪ್ರಚಾರ ರದ್ದುಗೊಳಿಸಿದ್ದಾರೆ.

ಮಗ ನಿಖಿಲ್ ಪರವಾಗಿ ತಾಯಿ ಅನಿತಾಕುಮಾರಸ್ವಾಮಿ ಅವರು ಹೊಸಹೊಳಲು ಗ್ರಾಮದಿಂದ ಪ್ರಚಾರ ಆರಂಭಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ