ಮಂಡ್ಯ ಕ್ಲೈಮ್ಯಾಕ್ಸ್‌ಗೆ ಸೂಪರ್ ಸ್ಟಾರ್ ರಜನಿಕಾಂತ್ ಎಂಟ್ರಿ?

ಮಂಡ್ಯ: ಕ್ಷೇತ್ರದಲ್ಲಿ ಇಷ್ಟು ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭರ್ಜರಿಯಿಂದ ಪ್ರಚಾರ ಮಾಡುತ್ತಿದ್ದರು. ನಾಳೆ (ಮಂಗಳವಾರ) ಚುನಾವಣೆಯ ಕೊನೆಯ ಬಹಿರಂಗ ಪ್ರಚಾರ ನಡೆಯಲಿದೆ. ಈ ಕ್ಲೈಮ್ಯಾಕ್ಸ್ ಪ್ರಚಾರಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಎಂಟ್ರಿ ಕೊಡುವ ಸಾಧ್ಯತೆಯಿದೆ.

ನಾಳೆ ಬಹಿರಂಗ ಪ್ರಚಾರಕ್ಕೆ ಕಡೆಯ ದಿನವಾಗಿದ್ದು, ಇಂದು ಮೈತ್ರಿ ನಿಖಿಲ್ ಕುಮಾರಸ್ವಾಮಿ ಪರ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಚಾರ ನಡೆಸಲಿದ್ದಾರೆ. ಹೀಗಾಗಿ ನಾಳೆ ರಜನಿಕಾಂತ್ ಕರೆಸಲೇಬೇಕು ಎಂದು ಸುಮಲತಾಗೆ ಅಭಿಮಾನಿಗಳು ಒತ್ತಡ ಹಾಕುತ್ತಿದ್ದಾರೆ.

ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಸುಮಲತಾ ಅಂಬರೀಶ್ ಅವರು ಬೃಹತ್ ಸಮಾವೇಶವನ್ನು ಏರ್ಪಡಿಸಿದ್ದಾರೆ. ಈ ಸಮಾವೇಶಕ್ಕೆ ರಜಿನಿಕಾಂತ್ ಕರೆಸುವಂತೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ರಜನಿಕಾಂತ್ ಅವರು ಅಂಬರೀಶ್ ಅವರ ಆಪ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪ್ರಚಾರಕ್ಕೆ ಬರುವಂತೆ ಸುಮಲತಾ ಅವರು ರಜನಿಕಾಂತ್‍ಗೆ ಕರೆ ಮಾಡಿದ್ದಾರೆ. ಒಂದು ವೇಳೆ ರಜನಿಕಾಂತ್ ಬರೋದು ಓಕೆ ಆದರೆ ನಾಳೆ ಸುಮಲತಾ ನೇತೃತ್ವದ ಸಮಾವೇಶಕ್ಕೆ ಮತ್ತಷ್ಟು ರಂಗು ಬರಲಿದೆ.

ಮಂಡ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ತಮಿಳು ಭಾಷಿಕರ ಮತವಿದೆ. ಅಷ್ಟೇ ಅಲ್ಲದೆ ಮಂಡ್ಯದಲ್ಲೂ ರಜನಿಕಾಂತ್ ಅವರ ಅಭಿಮಾನಿಗಳು ತುಂಬಾ ಜನರಿದ್ದಾರೆ. ಹೀಗಾಗಿ ರಜನಿಕಾಂತ್ ಬಂದರೆ ಮಂಡ್ಯದಲ್ಲಿರುವ ತಮಿಳರ ವೋಟ್‍ಗಳು ಸುಮಲತಾಗೆ ಬರಲಿವೆ ಎಂಬ ಲೆಕ್ಕಾಚಾರದಲ್ಲಿ ರಜನಿಕಾಂತ್ ಕರೆಸಲು ಸುಮಲತಾ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ರಜನಿಕಾಂತ್ ಬಂದರೆ ಸುಮಲತಾ ಅವರಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎನ್ನುವ ಲೆಕ್ಕಾಚಾರವನ್ನು ಹಾಕಲಾಗಿದೆ. ಆದರೆ ಕರ್ನಾಟಕದ ವಿರುದ್ಧ ಕಾವೇರಿ ಹೋರಾಟದಲ್ಲಿ ರಜನಿಕಾಂತ್ ಪಾಲ್ಗೊಂಡಿದ್ದರು. ಹೀಗಾಗಿ ರಜನಿಕಾಂತ್ ಬರುತ್ತಾರಾ ಇಲ್ಲವೋ ಎನ್ನುವುದು ಮಂಗಳವಾರ ಸ್ಟಷ್ಟವಾಗಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ