ಪುತ್ರ ನಿಖಿಲ್ ಪರ ಮತ ಯಾಚನೆ ಮಾಡಿದ ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ಕೊನೆ ಹಂತದ ಪ್ರಚಾರ ಕೈಗೊಂಡು ಮತ ಯಾಚನೆ ಮಾಡಿದರು.

ಸುಮಾರು ಒಂದು ವಾರದಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲೇ ಬಿಡಾರ ಹೂಡಿರುವ ಮುಖ್ಯಮಂತ್ರಿ ನಿಖಿಲ್ ಕುಮಾರಸ್ವಾಮಿ ಪರವಾಗಿ ರೋಡ್‍ಶೋ, ಬಹಿರಂಗ ಸಮಾವೇಶ ನಡೆಸಿ ಮತಯಾಚನೆ ಮಾಡಿದರು.

ಅಲ್ಲದೆ, ಮೈತ್ರಿ ಅಭ್ಯರ್ಥಿ ಗೆಲುವಿಗಾಗಿ ಕ್ಷೇತ್ರದಲ್ಲೇ ಇದ್ದು, ಸ್ಥಳೀಯ ನಾಯಕರು, ಮುಖಂಡರೊಂದಿಗೆ ಕಾರ್ಯತಂತ್ರವನ್ನು ರೂಪಿಸಿದ್ದಾರೆ.

ನಿನ್ನೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು, ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರು ಪಾಂಡವಪುರದಲ್ಲಿ ನಿಖಿಲ್ ಪರವಾಗಿ ಮತ ಯಾಚನೆ ಮಾಡಿದರು.

ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು ಸಂಜೆಯವರೆಗೂ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ಮಾಡಿ ಸಂಜೆ ರಾಜಧಾನಿ ಬೆಂಗಳೂರಿಗೆ ಮರಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ