ಈಶ್ವರ ಖಂಡ್ರೆ ಪರ ಯುವ ಮುಖಂಡ ವಿಜಯಕುಮಾರ ಕೌಡ್ಯಾಳ ಮಿಂಚಿನ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಯುವ ಮುಖಂಡ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಔರಾದ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡ್ಯಾಳ ನೇತೃತ್ವದಲ್ಲಿ ಔರಾದ್ ತಾಲೂಕಿನ ವಿವಿಧೆಡೆ ಬುಧವಾರ ಬಿರುಸಿನ ಪ್ರಚಾರ ನಡೆಸಲಾಯಿತು.

ಕೌಠಾ (ಬಿ), ಕೌಠಾ (ಕೆ), ಗಡಿ ಕುಶನೂರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ನಡೆಸಿ, ಈಶ್ವರ ಖಂಡ್ರೆ ಪರವಾಗಿ ಮತಯಾಚನೆ ಮಾಡಿದರು.

ಕಾಂಗ್ರೆಸ್, ಜೆಡಿಎಸ್ ನ ಮೈತ್ರಿ ಪಕ್ಷದ ಅಭ್ಯರ್ಥಿ ಯಾಗಿರುವ ಈಶ್ವರ ಖಂಡ್ರೆಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುಸುವ ಮೂಲಕ ದಿಲ್ಲಿಗೆ ಕಳುಹಿಸಿ, ಅವಕಾಶ ಕೊಟ್ಟರು ಕೆಲಸ ಮಾಡದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಗೆ ಮನೆಗೆ ಕಳುಹಿಸಿ ಎಂದು ವಿಜಯಕುಮಾರ ಕೌಡ್ಯಾಳ ಹೇಳಿದರು.

ಈ ಬಾರಿ ಮೋದಿ ಹವಾ ನಡೆಯಲ್ಲ. ಈಶ್ವರ ಖಂಡ್ರೆ ಗೆಲುವು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾತಿನಲ್ಲಿ ಮನೆ ಕಟ್ಟುವ ಬಿಜೆಪಿಗೆ ಈ ಬಾರಿ ಜನ ಮನೆಗೆ ಕಳುಹಿಸಲು ನಿರ್ಧರಿಸಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರು ಭಾರಿ ಬಹುಮತದಿಂದ ಆರಿಸಿ ಬರಲುದ್ದಾರೆ ಎಂದು ಹೇಳಿದರು.

ಮಾಜಿ ಶಾಸಕರಾದ ಗುಂಡಪ್ಪ ಬಿರಾದಾರ, ಕೆ. ಪುಂಡಲೀಕರಾವ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಗೀತಾ ಚಿದ್ರಿ, ಪ್ರಮುಖರಾದ ಮೀನಾಕ್ಷಿ ಸಂಗ್ರಾಮ, ರಾಜಕುಮಾರ ಹಲಬುರ್ಗೆ ಇತರರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ