ದಿನದಿಂದ ದಿನಕ್ಕೆ ಏರುತ್ತಿರುವ ಚುನಾವಣಾ ಕಾವು

ಬೆಳಗಾವಿ, ಏ.17-ಬೆಳಗಾವಿ ಲೋಕಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ಕಾವು ಏರುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಪಕ್ಷೇತರ ಅಭ್ಯರ್ಥಿಗಳು ಪೈಪೋಟಿ ನೀಡಲು ಸನ್ನದ್ದರಾಗಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಸುರೇಶ ಅಂಗಡಿ ಹಾಗೂ ಕಾಂಗ್ರೆಸ್, ಜೆಡಿಎಸ್‍ನ ಮೈತ್ರಿ ಅಭ್ಯರ್ಥಿ ಡಾ. ವಿ.ಎಸ್.ಸಾಧುನವರ ನಡುವೆ ತೀವ್ರ ಪೈಪೋಟಿ ಜೋರಾಗಿ ನಡೆಯುತ್ತಿದೆ.

ಇದರ ನಡುವೆ ಚಿಕ್ಕೋಡಿಗೆ ನಾಳೆ ಮಧ್ಯಾಹ್ನ 2.45 ಕ್ಕೆ ಬಿ.ಕೆ.ಕಾಲೇಜು ಆವರಣದ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಚಿಕ್ಕೋಡಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಅಬ್ಬರದ ಪ್ರಚಾರ ಕಾರ್ಯಕ್ಕೆ ಚಿಕ್ಕೋಡಿ ಸಜ್ಜಾಗಿದೆ.

ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ ಜೊಲ್ಲೆ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಪರ ಮೋದಿ ಮತ ಬೇಟೆ ಮಾಡಲಿದ್ದಾರೆ. ಈ ಸಮಾವೇಶಕ್ಕೆ ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಬಿಜೆಪಿಗೆ ಆನೆ ಬಲ ತುಂಬಲು ಬೆಳಗಾವಿ ಜಿಲ್ಲೆಗೆ ನಾಳೆ ಮೋದಿ ಪ್ರಯಾಣ ಬೆಳೆಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ