ವಿಶ್ರಾಂತಿಗಾಗಿ ಸಿಂಗಾಪುರ್‍ಗೆ ತೆರಳಲಿರುವ ಸುಮಲತಾ ಮತ್ತು ಇತರರು

ಮಂಡ್ಯ, ಏ.17- ಕಳೆದೊಂದು ತಿಂಗಳಿನಿಂದ ಅಬ್ಬರದ ಪ್ರಚಾರ ನಡೆಸಿ ದಣಿದಿರುವ ಸುಮಲತಾ ಮತ್ತು ಅವರ ಪುತ್ರ ಅಭಿಷೇಕ್ ಗೌಡ ಸಿಂಗಾಪೂರಕ್ಕೆ ವಿಶ್ರಾಂತಿಗಾಗಿ ತೆರಳಲಿದ್ದಾರೆ.

ನಾಳೆ ಚುನಾವಣೆ ಮುಗಿದ ತರುವಾಯ ರಾತ್ರಿ ಬೆಂಗಳೂರಿಗೆ ಆಗಮಿಸಿ ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಮಾರು 20 ದಿನಗಳ ಹಿಂದೆಯೇ ಟಿಕೆಟ್ ಬುಕ್ ಮಾಡಲಾಗಿದ್ದು , ಇವರ ಜತೆ ಇನ್ನು ಹಲವರು ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ