ಖಂಡ್ರೆ ಪರ ವಿಜಯಕುಮಾರ ಕೌಡ್ಯಾಳ ಪ್ರಚಾರ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಗೆಲ್ಲಿಸಿ

ಬೀದರ್: ಸರ್ವ ಸಮಾಜಗಳ ಅಭಿವೃದ್ಧಿ ಹಾಗೂ ಎಲ್ಲ ಸಮುದಾಯದ ಹಿತ ರಕ್ಷಣೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಕಾಂಗ್ರೆಸ್ನ ಯುವ ಮುಖಂಡ, ಕಳೆದ ವಿಧಾನಸಭೆ ಚುನಾವಣೆಯ ಔರಾದ್ ಕ್ಷೇತ್ರದ ಕೈ ಅಭ್ಯಥರ್ಿ ವಿಜಯಕುಮಾರ ಕೌಡ್ಯಾಳ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಚಿಕ್ಲಿಯಲ್ಲಿ ಪ್ರಚಾರ ನಡೆಸಿ ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ ಪೂರ್ಣ ಬಹುಮತ ನೀಡಬೇಕು. ಜಿಲ್ಲೆಯ ಅಭಿವೃದ್ಧಿಗೆ ಖಂಡ್ರೆ ಪರಿವಾರ ಮಹತ್ವದ ಕೊಡುಗೆ ನೀಡಿದೆ ಎಂದರು.

ಈಶ್ವರ ಖಂಡ್ರೆ ಮೂರು ಬಾರಿ ಶಾಸಕರಾಗಿ, ಒಮ್ಮೆ ಸಚಿವರಾಗಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕೋಮುವಾದಿ ಶಕ್ತಿಯನ್ನು ಅಧಿಕಾರದಿಂದ ದೂರ ಇಡಬೇಕಾಗಿದೆ. ಹೀಗಾಗಿ ಜಿಲ್ಲೆಯ ಅಭಿವೃದ್ಧಿಗಾಗಿ ಈಶ್ವರ ಖಂಡ್ರೆ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸಂವಿಧಾನ ತಿದ್ದುಪಡಿ ಮಾಡುವುದಾಗಿ ಕೇಂದ್ರ ಸಚಿವರು ಬಹಿರಂಗ ಹೇಳಿಕೆ ನೀಡುತ್ತಾರೆ. ಆದರೆ, ಪ್ರಧಾನಿ ಮೋದಿ ಮೌನವಾಗಿ ಕುಳಿತು ಇದಕ್ಕೆ ಸಮ್ಮತಿ ನೀಡುತ್ತಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳಲ್ಲಿ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಯಾವುದೇ ಧಕ್ಕೆಯಾಗಿಲ್ಲ. ಆದರೆ ಮೋದಿ ಅಧಿಕಾರಕ್ಕೆ ಬಂದ ದಿನದಿಂದ ಪ್ರಜಾಪ್ರಭುತ್ವ ವಿರೋಧ ಕೆಲಸಗಳು ನಡೆಯುತ್ತಿವೆ. ಹೀಗಾಗಿ ಬಿಜೆಪಿಗೆ ಪಾಠ ಕಲಿಸಲು ಕಾಂಗ್ರೆಸ್ಗೆ ಬೆಂಬಲಿಸಬೇಕು ಎಂದರು.

ಮಾಜಿ ಶಾಸಕ ಗುಂಡಪ್ಪ ವಕೀಲ, ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಪ್ರಮುಖರಾದ ಮೀನಾಕ್ಷಿ ಸಂಗ್ರಾಮ, ಪಂಡಿತ ಚಿದ್ರಿ, ರಾಜಕುಮಾರ ಹಲಬುಗರ್ೆ ಇತರರಿದ್ದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ