ಅಂಗವಿಕಲನ ನಡೆ ಪಾರ್ಲಿಮೆಂಟ್ ಕಡೆ

ಬೀದರ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಅಂತಾರಾಷ್ಟ್ರೀಯ ಕ್ರೀಡಾ ಪಟು ಮೌಲಪ್ಪ ಮಾಳಗೆ ಗುರುವಾರ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು.

ಧುಮಸಾಪುರ, ತಾದಲಾಪುರ, ಕೊಳಾರ್, ನಿಜಾಂಪುರ, ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಪಾದಯಾತ್ರೆ ಮೂಲಕ ಮನೆ, ಮನೆಗೆ ಮತಯಾಚನೆ ಮಾಡಿದರು. ಕೇವಲ ಸುಳ್ಳು ಭರವಸೆ ನೀಡುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಮಾತಿಗೆ ಮತದಾರರು ಮರಳಾಗದಿರಿ. ಸ್ಥಳೀಯವಾಗಿ ಎಲ್ಲರಿಗೆ ಸಿಗುವ ಪಕ್ಷೇತರ ಅಭ್ಯರ್ಥಿ ನನಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.


ಅಂಗವೈಕಲ್ಯ ಆದರು ಸಹ ನಾನು ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಯಶಸ್ವಿ ಯಾಗಿರುವೆ. ಅದೇ ರೀತಿ ರಾಜಕೀಯ ರಂಗದಲ್ಲಿ ಸಾಧನೆ ಮಾಡಲು ಅಂಗವಿಕಲನಾದ ನನಗೆ ಒಂದು ಬಾರಿ ಅವಕಾಶ ನೀಡಿ. ಈ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ರಾಷ್ಟ್ರೀಯ ಪಕ್ಷಗಳು ಕ್ಷೇತ್ರವನ್ನು ಕಡೆಗಣಿಸಿವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ನಾನು ಚುನಾವಣೆ ಕಣಕ್ಕೆ ಇಳಿದಿರುವೆ. ಟ್ರ್ಯಾಕ್ಟರ್ ಚಿಹ್ನೆ ಹೊಂದಿರುವ ನನಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.


ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ನ ಅಭ್ಯರ್ಥಿಗಳು ಕ್ಷೇತ್ರದ ಅಭಿವೃದ್ಧಿ ಪರ ಚಿಂತನೆ ಮಾಡುವ ಬದಲು, ಇಬ್ಬರು ವಯಕ್ತಿಕ ಟೀಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರನ್ನು ಗೆಲ್ಲಿಸಿಕೊಂಡು ಬಂದರೆ ಪ್ರಯೋಜನ ಇಲ್ಲ. ಈ ಬಾರಿ ನನಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ