ದಲಿತ ಸಮಾಜ ಹಿಂದುಳಿಯಲು ಕಾಂಗ್ರೆಸ್ ಕಾರಣ : ಅರಹಂತ ಸಾವಳೆ

ಬೀದರ್: ಹಿಂದುಳಿದ, ದಲಿತ ಸಮಾಜ ಹಿಂದುಳಿಯಲು ಕೇಂದ್ರದಲ್ಲಿ ಬಹು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಅರಹಂತ ಸಾವಳೆ ಹೇಳಿದರು.

ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರವಾಗಿ ಕಮಠಾಣ ಗ್ರಾಮದಲ್ಲಿ ಪ್ರಚಾರ ನಡೆಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕೊನೆಯ ದಿನಗಳಲ್ಲಿ ಅವರಿಗೆ ಕಾಂಗ್ರೆಸ್ ಸಾಕಷ್ಟು ಕಿರುಕುಳ ನೀಡಿದೆ. ಅಂಬೇಡ್ಕರ್ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ಮಾಡಲು ಕಾಂಗ್ರೆಸ್ ಬಿಟ್ಟಿಲ್ಲ ಎಂದು ದೂರಿದರು.

ಹಿಂದುಳಿದ ದಲಿತ ಸಮಾಜವನ್ನು ಅಭಿವೃದ್ಧಿ ಪಡಿಸಲು ಬಿಜೆಪಿ ಸಾಕಷ್ಟು ಯೋಜನೆ ಜಾರಿಗೆ ತಂದಿದೆ. ಅಂಬೇಡ್ಕರ್ ಅವರು ಲಂಡನ್ ನಲ್ಲಿ ವಾಸಿಸಿದ ಮನೆ, ದೆಹಲಿಯಲ್ಲಿನ ಸ್ಥಳ ಸೇರಿದಂತೆ ದೇಶದ ಅಂಬೇಡ್ಕರ್ ಅವರ ಐದು ಸ್ಥಳಗಳನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಭಿವೃದ್ಧಿ ಪಡಿಸಿ ಪ್ರವಾಸಿ ಸ್ಥಳಗಳಾಗಿ ಮಾಡಿದ್ದಾರೆ ಎಂದು ಹೇಳಿದರು.

ಖೂಬಾ ಸರಳ, ಸಜ್ಜನಿಕೆ ಅಭ್ಯರ್ಥಿ. ತಮ್ಮ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆ ಸೇರಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಮಾಡಿದ್ದಾರೆ. ಇನ್ನೊಂದು ಬಾರಿ ಅವಕಾಶ ನೀಡಬೇಕು. ಖೂಬಾ ಅವರು ಈ ಬಾರಿ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ