ಅಲ್ಪಸಂಖ್ಯಾತರ ಬಡಾವಣೆಯಲ್ಲಿ ಡಾ.ಗೀತಾ ಖಂಡ್ರೆ ಪ್ರಚಾರ ಜೋರು

ಬೀದರ್: ಮುಸ್ಲಿಂ, ಕ್ರಿಶ್ಚಿಯನ್‌ ಸೇರಿ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರ ಪತ್ನಿ ಡಾ.ಗೀತಾ ಖಂಡ್ರೆ ಹೇಳಿದರು.

ನಗರದ ವಿವಿಧ ಅಲ್ಪಸಂಖ್ಯಾತರ ಬಡಾವಣೆಯಲ್ಲಿ ಕಾಂಗ್ರೆಸ್ ಪರ ಮತಯಾಚನೆ ಮಾಡಿ ಮಾತನಾಡಿ, ಅಲ್ಪಸಂಖ್ಯಾತರ ಎಂದರೆ ಕೋಮುವಾದಿ ಪಕ್ಷ ಬಿಜೆಪಿ ಗೆ ಆಗಿಬರುವುದಿಲ್ಲ.

ಐದು ವರ್ಷಗಳ ಮೋದಿ ಆಡಳಿತ ದಲ್ಲಿ ಅಲ್ಪಸಂಖ್ಯಾತರ ಸಮುದಾಯವನ್ನು ಕಡೆಗಣಿಸಲಾಗಿದೆ. ಈ ಬಾರಿ ಅಲ್ಪಸಂಖ್ಯಾತರು ಬಿಜೆಪಿ ಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.


ಕೇವಲ ಮೇಲ್ವರ್ಗದ ಸಮುದಾಯಕ್ಕೆ ಎತ್ತಿ ಹಿಡಿದು ಕೆಳ ಸಮಾಜವನ್ನು ಬಿಜೆಪಿ ನಿರ್ಲಕ್ಷ್ಯ ವಹಿಸಿದೆ. ಆದರೆ ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯದ ಜನರನ್ನು ಸಮಾನವಾಗಿ ಕಂಡು ಅಭಿವೃದ್ಧಿ ಮಾಡುತ್ತಿದೆ. ನಿಜವಾಗಿ ಬಸವ ತತ್ವ ವನ್ನು ಕಾಂಗ್ರೆಸ್ ಪಕ್ಷ ಅನುಷ್ಠಾನಕ್ಕೆ ತರುತ್ತಿದೆ ಎಂದರು.
ಕರ್ನಾಟಕ ಕ್ರಿಶ್ಚಿಯನ್ ರಕ್ಷಣಾ ಸಮಿತಿ ಅಧ್ಯಕ್ಷ ಅಲ್ಬಟ್೯ ಕೋಟೆ ಇತರರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ