ಖಂಡ್ರೆ ಆಪ್ತ ಪಪ್ಪು ಪಾಟೀಲ್ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಗೆಲುವಿಗಾಗಿ ಖಂಡ್ರೆ ಅವರ ಆಪ್ತ, ಕೆಪಿಸಿಸಿ ಅಸಂಘಟಿತ ಕಾರ್ಮಿಕ ಸಮಿತಿ ರಾಜ್ಯ ಉಪಾಧ್ಯಕ್ಷ ಪಪ್ಪು ಪಾಟೀಲ್ ಖಾನಾಪುರ ಕಳೆದೊಂದು ತಿಂಗಳಿನಿಂದ ಕ್ಷೇತ್ರ ಎಲ್ಲೆಡೆ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ.

ಕಾರ್ಮಿಕ ಸಮಿತಿ ನೂರಾರು ಕಾರ್ಯಕರ್ತರೊಂದೊಲಿಗೆ
ಪಪ್ಪು ಪಾಟೀಲ್ ಕ್ಷೇತ್ರದ ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದಾರೆ.

ನಿತ್ಯ ಹತ್ತಾರು ಹಳ್ಳಿ ಗಳಿಗೆ ಮಿಂಚಿನ ಸಂಚಾರ‌ ನಡೆಸಿ ತಮ್ಮ ರಾಜಕೀಯ ಗುರುಯಾಗಿರುವ ಈಶ್ವರ ಖಂಡ್ರೆ ಪರ ಪ್ರಚಾರ ನಡೆಸುತ್ತಿದ್ದಾರೆ.

ಬೀದರ್ ಕ್ಷೇತ್ರದ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಬಹುತೇಕ ಮತದಾರರ ಜತೆ ನೇರವಾಗಿ ಭೇಟಿ ಯಾಗಿ‌ ಮತಯಾಚನೆ ಮಾಡಿದ್ದಾರೆ.

ಬೆಳಗ್ಗೆ ಆರು ಗಂಟೆಯಿಂದ ರಾತ್ರಿ ವರೆಗೆ ‌ಒಂದು ಕ್ಷಣವೂ ವಿಶ್ರಾಂತಿ ಪಡೆಯದೆ ಪ್ರಚಾರ ದಲ್ಲಿ ತೊಡಗಿದ್ದಾರೆ.

ಕ್ಷೇತ್ರದ ಎಲ್ಲೆಡೆ ಹೋದರು ಸಿಗುತ್ತಿರುವ ಬೆಂಬಲ ನೋಡಿದರೆ ಮೈತ್ರಿ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿಲಿದ್ದಾರೆ. ಕೇವಲ ಮೋದಿ ಅಲೆ ಜಪ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಮನೆಗೆ ಕಳುಹಿಸಬೇಕು ಎಂದು ಮತದಾರರಿಗೆ ಪಪ್ಪು ಪಾಟೀಲ್ ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ