ವಿದ್ಯುತ್ ಸ್ಪರ್ಶಿಸಿ ಅಡುಗೆ ಭಟ್ಟರ ಸಾವು

ಬೆಂಗಳೂರು, ಏ.21- ಫುಟ್‍ಪಾತ್‍ನಲ್ಲಿ ನಡೆದು ಹೋಗುತ್ತಿದ್ದ ಅಡುಗೆ ಭಟ್ಟರೊಬ್ಬರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವೀವರ್ಸ್ ಕಾಲೋನಿ ನಿವಾಸಿ ಬಾಲಕೃಷ್ಣ (40)ಮೃತಪಟ್ಟಿರುವ ಅಡುಗೆಭಟ್ಟ. ವಿದ್ಯುತ್ ಸ್ಪರ್ಶಿಸಿ ಅವರು ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ನಿನ್ನೆ ಸಂಜೆ 6.30ರ ಸಮಯದಲ್ಲಿ ಮಳೆ ಸುರಿಯುತ್ತಿತ್ತು. ಆ ಸಂದರ್ಭದಲ್ಲಿ ಬಾಲಕೃಷ್ಣ ಅವರು ಬನ್ನೇರುಘಟ್ಟ ರಸ್ತೆಯ ಫುಟ್‍ಪಾತ್‍ನಲ್ಲಿ ಮನೆಗೆ ನಡೆದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಹಿಂದೆ ಮಗ್ಗದ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಅಡುಗೆ ಕೆಲಸ ಮಾಡುವುದನ್ನೇ ಉದ್ಯೋಗ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕೋಣನಕುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ