ಮಾಜಿ ಸಚಿವ ಮುನಿಯಪ್ಪಗೆ ಕೌಡ್ಯಾಳ ಅದ್ದೂರಿ ಸ್ವಾಗತ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಪ್ರಚಾರಕ್ಕೆ ನಗರಕ್ಕೆ ಭಾನುವಾರ ಆಗಮಿಸಿದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ಮುಖಂಡ ಕೆ.ಎಚ್. ಮುನಿಯಪ್ಪ ಅವರಿಗೆ ಪಕ್ಷದ ಯುವ ಮುಖಂಡ ವಿಜಯಕುಮಾರ ಕೌಡ್ಯಾಳ ಅದ್ದೂರಿ ಯಾಗಿ ಸ್ವಾಗತಿಸಿದರು.

ನಗರದ ಹೊರವಲಯದ ಹೈದರಾಬಾದ್ ರಸ್ತೆಯಲ್ಲಿ ಮುನಿಯಪ್ಪ ಅವರಿಗೆ ಕೌಡ್ಯಾಳ ಹೂಗುಚ್ಚ ನೀಡಿ ಬರಮಾಡಿಕೊಂಡರು.

ಉಭಯ ನಾಯಕರು ಲೋಕಸಭಾ ಚುನಾವಣೆ ಕುರಿತು ಚರ್ಚೆ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ