ಖಂಡ್ರೆ ಪರ ಅಂತಿಮ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪುತ್ರ, ಯುವ ಮುಖಂಡ ಸಾಗರ ಖಂಡ್ರೆ ಬಹಿರಂಗ ಪ್ರಚಾರದ ಕೊನೆಯ ದಿನವಾದ ಭಾನುವಾರ ಬಿರುಸಿನ ಪ್ರಚಾರ ನಡೆಸಿದರು.

ಭಾಲ್ಕಿ ತಾಲೂಕಿನ ಧನ್ಮೂರ್ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಸಾಗರ ಖಂಡ್ರೆ, ದೇಶದ ಹಿತ ದೃಷ್ಟಿಯಿಂದ ಈ ಚುನಾವಣೆ ಅತ್ಯಂತ ಮಹತ್ವದ ಚುನಾವಣೆಯಾಗಿದೆ. ದೇಶವನ್ನು ಛಿದ್ರ ಮಾಡುತ್ತಿರುಬ ಬಿಜೆಪಿಗೆ ಪಾಠ ಕಲಿಸಿ, ಕಾಂಗ್ರೆಸ್ ಅಭ್ಯರ್ಥಿ, ನಮ್ಮ ತಂದೆಯವರಾದ ಈಶ್ವರ ಖಂಡ್ರೆ ಅವರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಮೂರು ಬಾರಿ ಶಾಸಕರಾಗಿ, ಸಚಿವರಾಗಿ ಈಶ್ವರ ಖಂಡ್ರೆ ಭಾಲ್ಕಿ ವಿಧಾನಸಭಾ ಕ್ಷೇತ್ರವನ್ನು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಇದೀಗ ಬೀದರ್ ಲೋಕಸಭಾ ಕ್ಷೇತ್ರದ ಸೇವೆ ಮಾಡುವ ಅವಕಾಶ ಸಿಕ್ಕೆದೆ.

ಪ್ರತಿಯೊಬ್ಬರೂ ಕಾಂಗ್ರೆಸ್ ಗೆ ಬೆಂಬಲಿಸುವ ಮೂಲಕ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಪ್ರಮುಖ ರಾದ ಪಪ್ಪು ಪಾಟೀಲ್ ಖಾನಾಪುರ ಇತರರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ