ಕೊಲಂಬೋ ಸರಣಿ ಬಾಂಬ್ ಸ್ಪೋಟ-ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ನಾಗರಾಜ ರೆಡ್ಡಿ

ಬೆಂಗಳೂರು,ಏ.22-ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಶಾಸಕ ರಾಮಲಿಂಗಾರೆಡ್ಡಿ ಅವರ ಆಪ್ತ ನಾಗರಾಜ ರೆಡ್ಡಿ ಸರಣಿ ಬಾಂಬ್ ಸ್ಫೋಟದಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಿಟಿಎಂ ಬಡಾವಣೆ ನಿವಾಸಿಯಾದ ನಾಗರಾಜ ರೆಡ್ಡಿ ಅವರು ತಮ್ಮ ನಾಲ್ಕು ಮಂದಿ ಸ್ನೇಹಿತರೊಂದಿಗೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದರು.

ನಿನ್ನೆ ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ನಂತರ ಲಂಕಾದಲ್ಲಿದ್ದ ನಾಗರಾಜ ರೆಡ್ಡಿ ಅವರನ್ನು ಸಂಪರ್ಕಿಸಲು ಕುಟುಂಬ ವರ್ಗದವರಿಗೆ ಸಾಧ್ಯವಾಗಿರಲಿಲ್ಲ.

ಹೀಗಾಗಿ ಸರಣಿ ಬಾಂಬ್ ಸ್ಫೋಟದಲ್ಲಿ ಅನಾಹುತ ಸಂಭವಿಸಿರಬಹುದೆಂದು ನಾಗರಾಜ ರೆಡ್ಡಿ ಕುಟುಂಬಸ್ಥರು ಆತಂಕಗೊಂಡಿದ್ದರು.ಆದರೆ ಇತ್ತೀಚೆಗೆ ಮಾಹಿತಿ ಪ್ರಕಾರ ನಾಗರಾಜ ರೆಡ್ಡಿ ಅವರು ಬಾಂಬ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಆದರೆ ನಾಗರಾಜ ರೆಡ್ಡಿ ಅವರು ಶ್ರೀಲಂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವಿದೇಶಾಂಗ ಸಚಿವಾಲಯದಿಂದ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬೀಳದಿರುವುದು ರೆಡ್ಡಿ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ