ಈಶಾನ್ಯ ಭಾರತ ರಾಜ್ಯಗಳಲ್ಲಿ ಇಂದು ಪ್ರಭಲ ಭೂಕಂಪ

ನವದೆಹಲಿ, ಏ.24- ಈಶಾನ್ಯ ಭಾರತದ ರಾಜ್ಯಗಳಲ್ಲಿ ಇಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ಇದುವರೆಗೂ ಯಾವುದೇ ಹಾನಿಯ ಬಗ್ಗೆ ವಿವರಗಳು ಲಭ್ಯವಾಗಿಲ್ಲ.

ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಇಂದು ನಸುಕಿನಲ್ಲಿ ಪ್ರಬಲ ಭೂಕಂಪ ಕಂಪಿಸಿದೆ. ಅರುಣಾಚಲದ ಪಶ್ಚಿಮ ಸಿಯಾಂಗ್‍ನಲ್ಲಿ ಮುಂಜಾವ 1.30 ರ ವೇಳೆಗೆ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ಕೇಂದ್ರ ಬಿಂದು ವಾಯುವ್ಯ ಭಾಗದದಲ್ಲಿ ಕೇಂದ್ರಿಕೃತವಾಗಿತ್ತು, 9 ಕಿ.ಮೀ ಆಳದಲ್ಲಿತ್ತು ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ಧಾರೆ.

ಕೆಲವೆಡೆ ಭೂಮಿ ಕಂಪನವಾಗಿದ್ದು, ಚೀನಾದ ಕೆಲ ಭಾಗಗಳು, ಟಿಬೆಟ್, ನೇಪಾಳ, ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಂಪನ ಅನುಭವಕ್ಕೆ ಬಂದಿದೆ. ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರಾ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಣಿಪುರ ರಾಜ್ಯಗಳನ್ನು ವಿಶ್ವದ ಅತಿ ಹೆಚ್ಚು ಭೂಕಂಪನ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ.

ಭೂಕಂಪದ ತೀವ್ರತೆ ಕಡಿಮೆ ಇರುವುದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿರುವ ಬಗ್ಗೆ ಈ ವರೆಗೂ ವರದಿಯಾಗಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ