ರಾಜ್ಯಾದ್ಯಂತ ಕಟ್ಟೆಚರ ವಹಿಸಲು ಸಿ.ಎಂ. ಸೂಚನೆ

ಬೆಂಗಳೂರು, ಏ .27-ರಾಜ್ಯಾದ್ಯಂತ ಭದ್ರತಾ ವ್ಯವಸ್ಥೆಯನ್ನು ಬಿಗಿ ಗೊಳಿಸಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬ ಕರೆ ಮಾಡಿ ಉಗ್ರಗಾಮಿಗಳು ದೇಶದೊಳಗೆ ನುಸುಳಿದ್ದಾರೆ ಎಂಬ ಮಾಹಿತಿ ನೀಡಿರುವುದರಲ್ಲಿ ಸತ್ಯಾಂಶವಿಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿದ್ದಾರೆ.

ನಿಯಂತ್ರಣ ಕೊಠಡಿಗೆ ಬಂದಂತಹ ಕರೆಯನ್ನು ಪರಿಶೀಲಿಸಲಾಗಿದ್ದು, ಅದು ಹುಸಿ ಕರೆ ಎಂಬುದು ದೃಢ ಪಟ್ಟಿದೆ. ಆ ವ್ಯಕ್ತಿ ಈ ಹಿಂದೆಯೂ ಇಂಥದ್ದೇ ಕರೆಯನ್ನು ಮಾಡಿದ್ದ ಎಂದು ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿಯವರು ಕರೆ ಹುಸಿಯಾಗಿದ್ದರೂ ನಿರ್ಲಕ್ಷ್ಯ ಮಾಡದೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ