ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಕಾರು-ಒಬ್ಬರ ಸಾವು

ಚಿಕ್ಕಬಳ್ಳಾಪುರ, ಏ.28-ಮಗಳನ್ನು ಐಎಎಸ್ ಅಧಿಕಾರಿ ಮಾಡುವ ಕನಸನ್ನು ಹೊತ್ತು ನೆರೆ ರಾಜ್ಯದ ಹೈದರಾಬಾದ್‍ಗೆ ಮಗಳನ್ನು ಕರೆದೊಯ್ಯುವಾಗ ಅಪಘಾತ ಸಂಭವಿಸಿ ತಂದೆ ಸಾವನ್ನಪ್ಪಿ ಮಗಳು ಗಂಭೀರ ಗಾಯಗೊಂಡಿರುವ ದುರ್ಘಟನೆ ಇಂದು ಮುಂಜಾನೆ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ.

ಚಿಂತಾಮಣಿ ನಗರದ ಮಂಜುನಾಥ್‍ಅಯ್ಯರ್ (45) ಮೃತಪಟ್ಟ ದುರ್ದೈವಿ ತಂದೆ.

ಚಿಂತಾಮಣಿಯಲ್ಲಿ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಜುನಾಥ್ ಅಯ್ಯರ್ ಮಗಳಾದ ಕಾವ್ಯ ಅವರನ್ನು ಐಎಎಸ್ ಅಧಿಕಾರಿ ಮಾಡುವ ಕನಸು ಹೊಂದಿದ್ದರು.ತರಬೇತಿಗಾಗಿ ಹೈದರಾಬಾದ್‍ಗೆ ಬಿಡಲು ಕಾರಿನಲ್ಲಿ ತೆರಳುತ್ತಿದ್ದಾಗ ಮಾರ್ಗಮಧ್ಯೆ ಅನಂತಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬಂದ ಲಾರಿಗೆ ಡಿಕ್ಕಿಯಾಗಿದೆ.ಡಿಕ್ಕಿಯಾದ ರಭಸಕ್ಕೆ ಮಂಜುನಾಥ್ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಾಲಕ ಯಲ್ಲಪ್ಪ , ಮಗಳು ಕಾವ್ಯ ಹಾಗೂವಿನಯ್ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅನಂತಪುರ ಜಿಲ್ಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ