ಚಲಿಸುತ್ತಿದ ರೈಲಿನಲ್ಲಿ ಆಕಸ್ಮಿಕ ಬೆಂಕಿ-ಮಹಿಳೆಯ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಉಡುಪಿ, ಏ.28- ಚಲಿಸುತ್ತಿದ್ದ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆಯೊಬ್ಬರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ.

ಮುಂಬೈ ನಿಂದ ಎರ್ನಾಕುಲಂಗೆ ತೆರಳುತ್ತಿದ್ದ ನಿಜಾಮುದ್ದಿನ್ ಎಕ್ಸ್‍ಪ್ರೆಸ್ ಎಸಿ ರೈಲು ರಾತ್ರಿ 1.30ರಲ್ಲಿ ಬೈಂದೂರಿನ ರೈಲ್ವೆ ನಿಲ್ದಾಣ ಬಿಟ್ಟು ಚಲಿಸಿದಾಗ ಕಂಬದ ಕೋಣೆ ಸಮೀಪ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಪ್ರಯಾಣಿಕರೆಲ್ಲರೂ ಗಾಢನಿದ್ರೆಯಲ್ಲಿದ್ದರೂ ಬೆಂಕಿ ಬಿದ್ದಿರುವುದು ಯಾರ ಗಮನಕ್ಕೂ ಬಂದಿರಲಿಲ್ಲ. ಕುಂದಾಪುರ ನಿಲ್ದಾಣದಲ್ಲಿ ಇಳಿಯಬೇಕಿದ್ದ ಮಹಿಳೆ ಬೆಂಕಿಯನ್ನು ಗಮನಿಸಿ ತಕ್ಷಣ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾದ ರೈಲ್ವೆ ಸಿಬ್ಬಂದಿ ರೈಲನ್ನು ನಿಲ್ಲಿಸಿ ಬೆಂಕಿ ನಂದಿಸಿದ್ದಾರೆ.

ಮಹಿಳೆಯ ಸಮಯ ಪ್ರಜ್ಞೆಗೆ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದು, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಕಲ್ಪಿಸಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ