ಅಪ್ರಾಪ್ರ ಬಾಲಕಿ ಮೇಲೆ ಅತ್ಯಾಚಾರ; ಹತ್ಯೆ: ಮಗಳೇ ನಿನಗಾದ ಅನ್ಯಾಯಕ್ಕೆ ನಾವು ಸೇಡುತೀರಿಸಿಕೊಳ್ಳುತ್ತೆವೆ ಎಂದ ಸಾಧ್ವಿ ಪ್ರಜ್ನಾ ಸಿಂಗ್

ಭೋಪಾಲ್​: ಅಪ್ರಾಪ್ತಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ನಾ ಸಿಂಗ್, ಮಗಳೆ ನಿನಗಾದ ಅನ್ಯಾಯಕ್ಕೆ ನಾವು ಸೇಡು ತೀರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಅತ್ತೆಯೊಂದಿಗೆ ದೇವಸ್ಥಾನಕ್ಕೆ ತೆರಳಿದ್ದ 12 ವರ್ಷದ ಬಾಲಕಿ ಮೇಲೆ ಇಬ್ಬರು ಅತ್ಯಾಚಾರ ಎಸಗಿ ಹತ್ಯೆದಿದ್ದರು. ಈ ಪ್ರಕರಣದಲ್ಲಿ ಬಾಲಕಿಯ ಅತ್ತೆ 16 ವರ್ಷದ ಯುವತಿಯ ಪಾತ್ರವೂ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಕುಟುಂಬದವರ ದೂರಿನ ಮೇರೆಗೆ ಆರೋಪಿಗಳನ್ನು ಹಾಗೂ ಆಕೆಯ ಅತ್ತೆಯನ್ನು ಬಂಧಿಸಲಾಗಿದೆ. ಆರೋಪಿಗಳು ಬಾಲಕಿಯ ನೆರೆಮನೆಯವರಾಗಿದ್ದಾರೆ.

ಘಟನೆಯ ಬಗ್ಗೆ ಟ್ವೀಟ್​ ಮಾಡಿರುವ ಸಾಧ್ವಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿ ಕಮಲನಾಥ್​ ಅವರು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಹಾಗೇ ಮಗಳೇ, ನಾವು ನಿನಗಾದ ಅನ್ಯಾಯಕ್ಕೆ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ವಿಷಯ ಕೇಳುತ್ತಿದ್ದಂತೆ ಅಸ್ವಸ್ಥರಾದ ಬಾಲಕಿಯ ತಾಯಿಗೆ ಚಿಕಿತ್ಸೆ ಕೊಡಿಸಲು ಸ್ವತಃ ಪ್ರಜ್ಞಾ ಸಿಂಗ್​ ಅವರೇ ಕರೆದುಕೊಂಡು ಹೋಗಿದ್ದಾರೆ.

Pragya Thakur vows to avenge rape and murder of 12-year-old

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ