ಕುಡಿಯುವ ನೀರಿಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

ಬೆಂಗಳೂರು,ಮೇ 8- ಕುಡಿಯುವ ನೀರಿಗೆ ಆಗ್ರಹಿಸಿ ನೂರಾರು ಮಹಿಳೆಯರು ಬಿಡಬ್ಲ್ಯೂಎಸ್‍ಎಸ್‍ಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಲ್ಯಾಣ ನಗರದ ಬಿಡಬ್ಲ್ಯೂಎಸ್‍ಎಸ್‍ಬಿ ಕಚೇರಿ ಬಳಿ ಜಮಾಯಿಸಿದ ನೂರಾರು ಮಹಿಳೆಯರು ಹಲವಾರು ದಿನಗಳಿಂದ ಕುಡಿಯುವ ನೀರಿನ ಕೊರತೆ ಎದುರಾಗಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಉಲ್ಬಣವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಕೆ.ಜೆ.ಜಾರ್ಜ್ ಪ್ರನಿಧಿಸುವ ಸರ್ವಜ್ಞನಗರ ವ್ಯಾಪ್ತಿಗೆ ಬರುವ ಕಲ್ಯಾಣ ನಗರದಲ್ಲಿ ನೀರಿಗೆ ಹಾಹಾಕಾರ ಎದುರಾಗಿದೆ. ಆದರೆ ಈ ಬಗ್ಗೆ ಎಷ್ಟೇ ಮನವಿ ಮಾಡಿದರೂ ಅಧಿಕಾರಿಗಳು ನೀರಿನ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಆರೋಪಿಸಿದರು.

ಅನೇಕ ವಾರ್ಡ್‍ಗಳಿಗೆ ನೀರು ಬಿಡದೆ ಜನ ಪರಿತಪಿಸುತ್ತಿದ್ದಾರೆ.ಕೂಡಲೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ