ಮರಕ್ಕೆ ಡಿಕ್ಕಿ ಹೊಡೆದ ಕಾರು-ಘಟನೆಯಲ್ಲಿ ಇಬ್ಬರ ಸಾವು

ಚಿಕ್ಕಬಳ್ಳಾಪುರ, ಮೇ 10- ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ರೈಲ್ವೆ ಗೇಟ್ ಬಳಿ ನಡೆದಿದೆ.
ಮೃತರು ಹನುಮೇಶ್ (21) ಹಾಗೂ ಪುನೀತ್ (26) ಎಂದು ತಿಳಿದುಬಂದಿದೆ.ಗಾಯಗೊಂಡಿರುವ ಇತರೆ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿಕ್ಕಬಳ್ಳಾಪುರದ ಎಂಜಿ ರಸ್ತೆಯ ಆಂಜನೇಯ ಬೇಕರಿ ಮಾಲೀಕ ಪುನೀತ್ ತನ್ನ ಸ್ನೇಹಿತರೊಂದಿಗೆ ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿಗೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ.
ಮರಕ್ಕೆ ಡಿಕ್ಕಿ ಹೊಡೆದ ಕಾರು ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ವಾಹನ ಸಂಪೂರ್ಣ ಜಖಂಗೊಂಡಿದ್ದು, ಘಟನೆ ನಂತರ ಸ್ಥಳೀಯರು ಗಾಯಾಳುಗಳ ಜೀವ ಉಳಿಸಲು ಪ್ರಯತ್ನ ನಡೆಸಿದ್ದರೂ ಇಬ್ಬರು ಬದುಕುಳಿಯಲಿಲ್ಲ.
ಚಿಕ್ಕಬಳ್ಳಾಪುರ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ