ತೇಜಸ್ವಿನಿ ಅನಂತ್‍ಕುಮಾರ್ ಅವರು ಬಾಯಿ ಬಿಟ್ಟರೆ ಬಿಜೆಪಿ ಬಣ್ಣ ಬಯಲಾಗಲಿದೆ

ಬೆಂಗಳೂರು, ಮೇ 10- ಕೇಂದ್ರ ಸಚಿವರಾಗಿದ್ದ ದಿ.ಅನಂತ್‍ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರು ಬಾಯಿಬಿಟ್ಟರೆ ಬಿಜೆಪಿಯವರ ಬಣ್ಣ ಬಯಲಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂದು ನಾಲಿಗೆ ಹರಿಯಬಿಟ್ಟಿರುವ ಬಿಜೆಪಿ ನಾಯಕರೆ, ದಿ.ಅನಂತ್‍ಕುಮಾರ್ ಅವರ ಪತ್ನಿಗೆ ನೀಡಿರುವ ಕಿರುಕುಳವನ್ನು ನೆನಪು ಮಾಡಿಕೊಳ್ಳಿ. ಎಲ್ಲವನ್ನೂ ಸಹಿಸಿಕೊಂಡಿರುವ ಧೈರ್ಯವಂತ ಹೆಣ್ಣು ಮಗಳು ತೇಜಸ್ವಿನಿ ಅವರು ಬಾಯಿಬಿಟ್ಟರೆ ನಿಮ್ಮ ಬಣ್ಣ ಬಯಲಾಗಲಿದೆ ಎಂದು ಟ್ವೀಟರ್‍ನಲ್ಲಿ ಟಾಂಗ್ ನೀಡಿದ್ದಾರೆ.

ಎಸ್‍ಸಿ-ಎಸ್‍ಟಿ ಬಡ್ತಿ ಮೀಸಲಾತಿ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಸ್ವಾಗತಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ