ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಯಿಂದ ಹೊಸ ಕಾರ್ಯತಂತ್ರ

ಬೆಂಗಳೂರು, ಮೇ 10- ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಕಲಬುರಗಿ ಜಿಲ್ಲೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಗೆಲ್ಲಲು ಬಿಜೆಪಿ ಸಮುದಾಯಕ್ಕೊಬ್ಬರನ್ನು ನಿಯೋಜಿಸಲು ಮುಂದಾಗಿದೆ.

ಈ ಹಿಂದೆ ಬಾಗಲಕೋಟೆ ಜಿಲ್ಲೆ ಜಮಖಂಡಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ಅನುಸರಿಸಿದ ಕಾರ್ಯತಂತ್ರವನ್ನೇ ಇಲ್ಲಿ ಬಿಜೆಪಿ ಅಳವಡಿಸಿಕೊಂಡಿದೆ.

ಜಮಖಂಡಿಯಲ್ಲಿ ಅಂದು ಕಾಂಗ್ರೆಸ್ ಗ್ರಾಮಪಂಚಾಯ್ತಿಯಿಂದ ಹಿಡಿದು ತಾಲ್ಲೂಕು ಮಟ್ಟದವರೆಗೆ ಒಂದೊಂದು ಜಾತಿಯ 5-10 ಮಂದಿಯನ್ನು ನಿಯೋಜನೆ ಮಾಡಿತ್ತು. ಪರಿಣಾಮ ಎಲ್ಲ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಭಾರೀ ಮತಗಳ ಅಂತರದಿಂದ ಗೆದ್ದಿತ್ತು.

ಈಗ ಚಿಂಚೋಳಿ ಮತ್ತು ಕುಂದಗೋಳದಲ್ಲೂ ಇದೇ ಮಾದರಿಯನ್ನು ಅನುಸರಿಸಲು ಬಿಜೆಪಿ ಮುಂದಾಗಿದೆ.ಎರಡೂ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯಿತ ಮತಗಳು ನಿರ್ಣಾಯಕವಾಗಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ