ರಾಜ್ಯ ಸರ್ಕಾರದ ಬ್ರೈನ್ ಡೆಡ್ ಆಗಿದೆ-ಮಾಜಿ ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ,ಮೇ 10- ರಾಜ್ಯ ಸರ್ಕಾರದ ಬ್ರೈನ್ ಡೆಡ್ ಆಗಿದೆ. ಮೈತ್ರಿ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರ, ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ ರೆಸಾರ್ಟ್ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.

ಕುಂದಗೋಳ, ಚಿಂಚೊಳ್ಳಿ ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಲೋಕಸಭೆಯಲ್ಲಿ 22ಕ್ಕೂ ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣಾ ಫಲಿತಾಂಶ ಸರ್ಕಾರದ ಮೇಲೆ ತೀವ್ರ ತರಹದ ಪರಿಣಾಮ ಬೀರಲಿದೆ. ಮಾಜಿ ಪ್ರಧಾನಿ ಸೇರಿದಂತೆ ಕಾಂಗ್ರೆಸ್ ಘಟಾನು ಘಟಿ ನಾಯಕರಿಗೆ ಹಿನ್ನಡೆಯಾಗಲಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ