ಫೈನಲ್ ಪಂಚ್‍ಗೂ ಮುನ್ನ ತಿಮಪ್ಪನ ಮೊರೆ ಹೋದ ರೋಹಿತ್

ಟೀಂ ಇಂಡಿಯಾ ಹಿಟ್ಮ್ಯಾನ್ ರೋಹಿತ್ ಶರ್ಮಾ,ಐಪಿಎಲ್ ಫೈನಲ್ ಪಂದ್ಯಕ್ಕೂ ಮೊದಲು ಕುಟುಂಬ ಹಾಗು ಸ್ನೇಹಿತರ ಜೊತೆ ತಿರುಮಲದ ಶ್ರೀ ವೆಂಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ,ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ.ರೋಹಿತ್ ಶರ್ಮಾ ಕುಟುಂಬಕ್ಕಾಗಿ ಪ್ರತ್ಯೇಕ ದರ್ಶನ ವ್ಯವಸ್ಥೆ ಮಾಡಲಾಗಿತ್ತು.ದರ್ಶನದ ನಂತರ, ರೋಹಿತ್ ಶರ್ಮಾ ಪತ್ನಿ ಸಮೇತ ವಿಶೇಷ ಪೂಜೆಯಲ್ಲಿ ಭಾಗಿಯಾದ್ರು.ಇನ್ನು, ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಸಹ ತಿರುಮಲಕ್ಕೆ ಭೇಟಿ ತಿಮ್ಮಪ್ಪನ ದರ್ಶನ ಪಡೆದ್ರು.ಐಪಿಎಲ್ನಲ್ಲಿ ರೋಹಿತ್ ನಾಯಕತ್ವದ ಮುಂಬೈ ಇಂಡಿಯನ್ಸ್, ಫೈನಲ್ ಪ್ರವೇಶಿಸಿದೆ.ಸಿಎಸ್ಕೆ-ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇಂದು ನಡೆಯುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ, ಗೆಲ್ಲುವ ತಂಡದ ಜೊತೆ ಫೈನಲ್ನಲ್ಲಿ ಟ್ರೋಫಿಗಾಗಿ ಕಾದಾಟ ನಡೆಸಲಿದೆ.ದಿನೇಶ್ ಕಾರ್ತಿಕ್ ನಾಯಕತ್ವದ ಕೋಲ್ಕತ್ತಾ ನೈಟ್ರೈಡರ್ಸ್ ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿತ್ತು.ಈ ಇಬ್ಬರು ಆಟಗಾರರು ಇದೇ ತಿಂಗಳು 30ರಿಂದ ಇಂಗ್ಲೆಂಡ್ನಲ್ಲಿ ಆರಂಭವಾಗಲಿರೋ, ಏಕದಿನ ವಿಶ್ವಕಪ್ ಟೂರ್ನಿಗಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ