ದೇಶದ ಪ್ರಜಾಪ್ರಭುತ್ವ ಉಳಿಸುವ ಹೋರಾಟದ ದೃಷ್ಟಿಯಿಂದ ಈ ಚುನಾವಣೆ ಮಹತ್ವದ್ದಾಗಿದೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಸಾಗಿದ್ದು, ಈ ವೇಳೆ ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್​ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹಾಗೂ ಪತಿ ರಾಬರ್ಟ್ ವಾದ್ರಾ ದೆಹಲಿಯ ಲೂಧಿ ಎಸ್ಟೇಟ್​ನಲ್ಲಿರುವ ಸರ್ದಾರ್​ ಪಟೇಲ್​ ವಿದ್ಯಾಲಯದ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಮತದಾನದ ಬಳಿಕ ಮಾತನಾಡಿದ ಪ್ರಿಯಾಂಕಾ, ದೇಶದ ಪ್ರಜಾಪ್ರಭುತ್ವ ಉಳಿಸಲು ಹೋರಾಡುತ್ತಿರುವುದರಿಂದ ಈ ಚುನಾವಣೆ ಬಹಳ ಪ್ರಮುಖವಾಗಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನಾನು ನನ್ನ ಮತವನ್ನು ಚಲಾವಣೆ ಮಾಡಿದ್ದೇನೆ ಎಂದರು.

lok sabha election,priyanka gandhi,voting

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ