ಸಂಸದೆ ಶೋಭಾ ಕರಂದ್ಲಾಜೆಯವರಿಂದ ಮಹಿಳಾ ಸಮುದಾಯಕ್ಕೆ ಅಪಮಾನ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 16-ಕೆಲಸ ಮಾಡಲಾಗದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಹೇಳುವ ಮೂಲಕ ಸಂಸದೆ ಶೋಭಾಕರಂದ್ಲಾಜೆ ಮಹಿಳಾ ಸಮುದಾಯವನ್ನು ಅಪಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್‍ನಲ್ಲಿ ಕಿಡಿಕಾರಿದ್ದಾರೆ.

ಕುಮಾರಿ ಶೋಭಾಕರಂದ್ಲಾಜೆ ಅವರೇ ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ, ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೇ ಸಾಧನೆಯ ಉತ್ತುಂಗಕ್ಕೇರಿದವರು ಎಂದು ತಿರುಗೇಟು ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ