ಮೈತ್ರಿಯಲ್ಲಿ ಗೊಂದಲವಿಲ್ಲ, ಫಲಿತಾಂಶದ ನಂತರ ಮೈತ್ರಿ ಇನ್ನಷ್ಟು ಗಟ್ಟಿ; ಗುಂಡೂರಾವ್

ಬೆಂಗಳೂರು: ಗೊಂದಲಕ್ಕಿಂತ ರಾಜ್ಯ ಸರ್ಕಾರ ವಿಸರ್ಜನೆಯೊಂದೇ ಪರಿಹಾರ ಎಂಬ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೈತ್ರಿಯಲ್ಲಿ ಯಾವುದೇ ಗೊಂದಲ ಇಲ್ಲ. ಮೇ 23ರ ಫಲಿತಾಂಶದ ನಂತರ ಮೈತ್ರಿ ಇನ್ನಷ್ಟು ಗಟ್ಟಿಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಪದೇ, ಪದೇ ಗೊಂದಲದಲ್ಲಿ ಸರ್ಕಾರ ನಡೆಸುವುದಕ್ಕಿಂತ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗೋದು ಒಳ್ಳೇಯದು ಎಂಬುದು ಜನರ ಅಭಿಪ್ರಾಯವಾಗಿದೆ ಎಂಬುದಾಗಿ ಬಸವರಾಜ ಹೊರಟ್ಟಿ ಅವರು ಹೇಳಿರುವುದು ರಾಜ್ಯರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಬಸವರಾಜ ಹೊರಟ್ಟಿ ಸಾಹೇಬ್ರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ನಮ್ಮ ಮೈತ್ರಿಯಲ್ಲಿ ಯಾವುದೇ ಗೊಂದಲ್ಲ ಇಲ್ಲ. ಸರ್ಕಾರ ಅಸ್ಥಿರವಾಗುವುದಿಲ್ಲ. ಕೆಲವು ದಿನಗಳ ಹಿಂದಿನ ಬೆಳವಣಿಗೆಯಿಂದ ಅವರು ಹೇಳಿರಬಹುದು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ