ಅಪರಿಚಿತ ವಾಹನ ಡಿಕ್ಕಿ ನಾಲ್ವರು ಯುವಕರ ಸಾವು

ಬೀದರ್, ಮೇ 19- ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಹುಮ್ನಾಬಾದ್ ತಾಲ್ಲೂಕಿನ ಮಂಗಲಗಿ ಸಮೀಪ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 65ರಲ್ಲಿ ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು , ಮೃತರನ್ನು ಸಚಿನ್ ಹಣಮಂತ, ಅರುಣ್‍ಕುಮಾರ್ ಕಾಶಿನಾಥ, ಗುರುನಾಥ ವಿಠಲ ಹಾಗೂ ರಘುವೀರ ಬೀಮಶ್ಯ ಎಂದು ತಿಳಿದು ಬಂದಿದೆ.

ಹುಟ್ಟುಹಬ್ಬದ ಪಾರ್ಟಿಗಾಗಿ ಇವರೆಲ್ಲರೂ ಇಲ್ಲಿ ಸೇರಿದ್ದರು ಎಂದು ತಿಳಿದು ಬಂದಿದೆ. ರಸ್ತೆ ಪಕ್ಕದಲ್ಲಿ ಅವರು ರಸ್ತೆ ಪಕ್ಕದಲ್ಲಿ ಅವರು ಸಂಭ್ರಮಿಸುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.
ಸ್ಥಳೀಯರೊಬ್ಬರು ಈ ಘಟನೆ ನೋಡಿ ಪೆÇಲೀಸರಿಗೆ ಮಾಹಿತಿ ನೀಡಿದ್ದು , ಮುನ್ನಾಖೇಡ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ