ಮಂಜುನಾಥ ಸನ್ನಿಧಿಗೆ ಕುಡಿಯುವ ನೀರು ಪೂರೈಕೆ-ವೀರೇಂದ್ರ ಹೆಗಡೆಯವರಿಂದ ಮೇಯರ್ ಧನ್ಯವಾದ ಪತ್ರ

ಬೆಂಗಳೂರು, ಮೇ. 22- ಮಂಜುನಾಥ ಸನ್ನಿಧಿಗೆ ಕುಡಿಯುವ ನೀರು ಪೂರೈಕೆ ಮಾಡಿರುವುದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಬಿಬಿಎಂಪಿ ಮೇಯರ್‍ಗೆ ಪತ್ರ ಬರೆದು ಧನ್ಯವಾದ ಅರ್ಪಿಸಿದ್ದಾರೆ.

ನಿನ್ನೆಯಷ್ಟೆ ಬಿಬಿಎಂಪಿ ನೌಕರರ ಸಂಘ 75ಸಾವಿರ ಲೀಟರ್ ಕುಡಿಯುವ ನೀರನ್ನು ಧರ್ಮಸ್ಥಳಕ್ಕೆ ಕಳುಹಿಸಿತ್ತು. ಇದಕ್ಕೆ ಕೃತಜ್ಞತೆ ಸಲ್ಲಿಸಿ ವೀರೇಂದ್ರ ಹೆಗಡೆಯವರು ಪತ್ರ ಬರೆದಿದ್ದಾರೆ.

ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿದ್ದೀರಿ ಇದಕ್ಕೆ ನಾನು ಆಭಾರಿಯಾಗಿದ್ದೇನೆ. ಸಮಾಜ ಸೇವೆ ಮಾಡಿದ ನಿಮಗೆ ಶ್ರೀ ಮಂಜುನಾಥ ಸ್ವಾಮಿ ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿ ಅವರು, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಹಾಗೂ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಪತ್ರ ಬರೆದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ