ನನಗೂ ಸಚಿವ ಸ್ಥಾನ ಕೊಡಬೇಕು-ಶಾಸಕ ವಿ.ಮುನಿಯಪ್ಪ

ಬೆಂಗಳೂರು, ಮೇ 28-ಹಿರಿತನ ಆಧರಿಸಿ ಸಚಿವ ಸ್ಥಾನ ಕೊಡುವುದಾದರೆ ನನಗೂ ಅವಕಾಶ ಕೊಡಲೇಬೇಕು ಎಂದು ಶಿಡ್ಲಘಟ್ಟ ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಹೇಳಿದರು.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಸಂಪುಟ ಸೇರುವ ವಿಷಯವಾಗಿ ಕಾಂಗ್ರೆಸ್ ನಾಯಕರ ಬಳಿಯೂ ಮಾತುಕತೆ ನಡೆಸಿದ್ದೇನೆ. ಸಕಾರಾತ್ಮಕ ಭರವಸೆ ದೊರೆತಿದೆ. ಇಂದು ಕುಮಾರಸ್ವಾಮಿಯವರ ಜೊತೆ ಸಂಪುಟ ಸೇರುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಹಂಚಿಕೆಯ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ