ಸರ್ಕಾರವನ್ನು ಉಳಿಸಲು ಯಾವುದೇ ತ್ಯಾಗಕ್ಕೂ ಸಿದ್ಧ-ಸಚಿವ ಎಂ.ಸಿ.ಮನಗೂಳಿ

ಬೆಂಗಳೂರು, ಮೇ 29-ಸಮ್ಮಿಶ್ರ ಸರ್ಕಾರವನ್ನು ಉಳಿಸಲು ತಾವು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ತಿಳಿಸಿದರು.

ಇಂದು ಪದ್ಮನಾಭನಗರದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರ ಉಳಿಸಲು ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿ ನಡೆದುಕೊಳ್ಳುತ್ತೇವೆ. ಈ ಸರ್ಕಾರ 5 ವರ್ಷಗಳು ಪೂರೈಸಲು ನಾವು ಎಂತಹ ತ್ಯಾಗ ಮಾಡಲು ಹಿಂಜರಿಯವುದಿಲ್ಲ ಎಂದರು.

ಸಂಪುಟ ವಿಸ್ತರಣೆಯಂತಹ ವಿಚಾರಗಳು ವರಿಷ್ಠರ ತೀರ್ಮಾನ ಅದನ್ನು ಅವರೇ ನಿರ್ಧರಿಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ