ಪಕ್ಷ ಕೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸಚಿವ ಯುಟಿ ಖಾದರ್

ಬೆಂಗಳೂರು, ಮೇ 29-ಪಕ್ಷ ಬಯಸಿದ್ದೇ ಆದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ತಾವು ಸಿದ್ಧ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಕುಮಾರಕೃಪಾ ಅತಿಥಿ ಗೃಹದಲ್ಲಿಂದು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆಯ ಚರ್ಚೆ ನಡೆದಿಲ್ಲ. ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷಗಳ ಹಿರಿಯ ನಾಯಕರು ಇಂದು ಸಭೆ ನಡೆಸಿದ್ದಾರೆ. ಒಂದು ವೇಳೆ ಅಲ್ಲಿ ಸಂಪುಟ ಪುನಾರಚನೆಯಾಗಬೇಕೆಂದು ನಿರ್ಧಾರ ತೆಗೆದುಕೊಂಡರೆ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷ ನನ್ನನ್ನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಳಿದರೆ ನಾನು ಸಂತೋಷದಿಂದ ಒಪ್ಪಿಕೊಳ್ಳುತ್ತೇನೆ. ನಮಗೆ ಮೊದಲು ಪಕ್ಷ ಉಳಿಯಬೇಕು. ಆಮೇಲೆ ಶಾಸಕ ಸ್ಥಾನ, ಸಚಿವ ಸ್ಥಾನ. ಪಕ್ಷದ ಹಿತರಕ್ಷಣೆ ಮುಂದೆ ಯಾರೂ ದೊಡ್ಡವರಲ್ಲ. ನಾನೊಬ್ಬನೇ ಅಲ್ಲ, ಬಹಳಷ್ಟು ಮಂದಿ ಸಚಿವರು ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ