ಕೆಲಸ ಗುರುತಿಸಿ ಕೇಂದ್ರ ಸಂಪುಟದಲ್ಲಿ ಅವಕಾಶ ನಿಡಿರುವುದಕ್ಕೆ ಮೋದಿ, ಷಾ ಅವರಿಗೆ ಧನ್ಯವಾದ: ಸಂಸದ ಪ್ರಹ್ಲಾದ್ ಜೋಷಿ

ಬೆಂಗಳೂರು: ಬಿಜೆಪಿಯ ಕಾರ್ಯಕರ್ತನಾಗಿ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು, ಈ ಭಾರೀ ನರೇಂದ್ರ ಮೋದಿ, ಅಮಿತ್​ ಷಾ ಅವರು ಸಚಿವನಾಗಿ ಸೇವೆ ಸಲ್ಲಿಸಲು ಒಂದು ಅವಕಾಶ ಮಾಡಿಕೊಟ್ಟಿದ್ದು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಂಸದ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ.

ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಯಾರು ಯಾವ ಖಾತೆ ನಿಭಾಯಿಸಬಲ್ಲರು ಎಂಬುದನ್ನು ನೋಡಿ ಪಕ್ಷವೇ ಆ ಸಚಿವ ಸ್ಥಾನ ನೀಡಲಿದೆ. ಹಿರಿಯರು ಸಚಿವ ಸ್ಥಾನ ನೀಡುವುದರ ಕುರಿತು ಅವರೇ ನಿರ್ಧರಿಸಿರುತ್ತಾರೆ. ತನಗೆ ಯಾವುದೇ ಖಾತೆ ನೀಡಿದರು ನಿಭಾಯಿಸುವುದಾಗಿ ತಿಳಿಸಿದರು.

ಜನತೆಗೆ ಪ್ರಧಾನಿ ಮೋದಿ ಅವರ ಮೇಲೆ ಹೆಚ್ಚಿನ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ಮುಂದೆ ಮಾಡಬೇಕಾದ ಕೆಲಸಗಳನ್ನು ಎದುರಿಸುವ ಸವಾಲು ಸಹ ನನ್ನ ಮುಂದೆ ಇದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ