ಸಧ್ಯಕ್ಕೆ ಸಂಪುಟ ವಿಸ್ತರಣೆ, ಪುನರಚನೆ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ಸದ್ಯಕ್ಕೆ ರಾಜ್ಯ ಸಂಪುಟ ವಿಸ್ತರಣೆ, ಪುನರ್ ರಚನೆ ಮಾಡುವುದಿಲ್ಲ. ಶಾಸಕ ರಮೇಶ್ ಜಾರಕಿಹೊಳಿ‌ ಕೂಡ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರೋಷನ್‌ ಬೇಗ್​ಗೆ ಪಕ್ಷದಿಂದ ಶೋಕಾಸ್ ನೋಟಿಸ್​ ನೀಡಲಾಗಿದ್ದು ಅವರ ಉತ್ತರಕ್ಕಾಗಿ ಕಾಯಲಾಗುತ್ತಿದೆ. ಯಾರೂ ಪಕ್ಷ ಬಿಡುವುದಿಲ್ಲ ಎಂದರು.

ಸರ್ಕಾರ ಬೀಳಿಸುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಪದೇ ಪದೇ ಸಿಎಂ ಆಗುವೆ ಎಂದು ಬಿ.ಎಸ್​.ಯಡಿಯೂರಪ್ಪ ಹೇಳಬಾರದು. ಜನರಿಗೆ ಯಾವುದೇ ತಪ್ಪು ಮಾಹಿತಿ ನೀಡಬಾರದು. 2018ರಲ್ಲಿ ಜನತೆ ಯಾವ ಪಕ್ಷಕ್ಕೂ ಬಹುಮತ ನೀಡಲಿಲ್ಲ. ಹೀಗಾಗಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದೇವೆ. ಮೈತ್ರಿ ಸರ್ಕಾರ ಸುಭದ್ರವಾಗಿದೆ. ಯಾರೂ ಬೀಳಿಸುವುದಿಲ್ಲ ಎಂದರು.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರದಲ್ಲಿ ಮೋದಿ ಸರ್ಕಾರಕ್ಕೆ ಜನ ತೀರ್ಪು ನೀಡಿದ್ದಾರೆ. ರಾಜ್ಯ ಸರ್ಕಾರದ ಕಾರ್ಯವೈಖರಿ ಮೇಲೆ ಫಲಿತಾಂಶ ಕೊಟ್ಟಿಲ್ಲ. ಜನರ ಆದೇಶ ಪಾಲನೆ ಮಾಡಬೇಕು. ಜನರ ತೀರ್ಪುನ್ನು ನಾವು ಒಪ್ಪಿಕೊಂಡಿದ್ದೇವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ