ಕೇಂದ್ರ ಗೃಹ ಸಚಿವರ ಬಗ್ಗೆ ವ್ಯಂಗವಾಗಿ ಮಾತನಾಡಿರುವ ಪ್ರಿಯಾಂಖ ಖರ್ಗೆ

ಬೆಂಗಳೂರು, ಜೂ.1-ಕರ್ನಾಟಕದಿಂದ ಕೇಂದ್ರದಿಂದ ಸಚಿವರಾದವರಿಗೆ ಅಭಿನಂದನೆ ಸಲ್ಲಿಸಿರುವ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ನೂತನ ಗೃಹ ಸಚಿವ ಅಮಿತ್ ಷಾ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಗೃಹ ಇಲಾಖೆಗೆ ನೂತನ ಸಚಿವರು ಬಂದಿದ್ದಾರೆ, ನನಗನಿಸಿರುವ ಮಟ್ಟಿಗೆ ಇನ್ನು ಮುಂದೆ ಗೃಹ ಇಲಾಖೆಯ ಹೆಸರನ್ನು ಬದಲಾವಣೆ ಮಾಡಿ ಕ್ಲೀನ್‍ಚಿಟ್ ನೀಡುವ ಇಲಾಖೆ ಎಂದು ಮರುನಾಮಕರಣ ಮಾಡುವುದು ಸೂಕ್ತ ಎಂದು ಲೇವಡಿ ಮಾಡಿದ್ದಾರೆ.

ಈ ಹಿಂದೆ ಗುಜರಾತ್‍ನಲ್ಲಿ ಗೃಹ ಸಚಿವರಾಗಿದ್ದಾಗ ಅಮಿತ್ ಷಾ ಅವರ ಹೆಸರು ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ಕೇಳಿ ಬಂದಿತ್ತು. ವಿಚಾರಣೆ ನಡೆದು ಅವರಿಗೆ ಕ್ಲೀನ್ ಚಿಟ್ ಕೂಡ ಸಿಕ್ಕಿತ್ತು. ಗುಜರಾತ್ ರಾಜ್ಯ ಗೃಹ ಸಚಿವರಾಗಿದ್ದ ಅಮಿತ್ ಷಾ ಈಗ ಕೇಂದ್ರ ಸರ್ಕಾರದಲ್ಲಿ ಮೋದಿ ಸಂಪುಟದಲ್ಲಿ ಗೃಹ ಸಚಿವರಾಗಿದ್ದಾರೆ. ಹೀಗಾಗಿ ಪ್ರಿಯಾಂಕ್ ಲೇವಡಿ ಮಾಡಿದ್ದಾರೆ.

ಕರ್ನಾಟಕದಿಂದ ಸಚಿವರಾಗಿರುವ ಡಿ.ವಿ.ಸದಾನಂದಗೌಡ, ಸುರೇಶ್ ಅಂಗಡಿ, ಪ್ರಹ್ಲಾದ್ ಜೋಷಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಅವರು, ಇವರ ಪ್ರತಿನಿಧಿಸುವಿಕೆಯಿಂದ ರಾಜ್ಯಕ್ಕೆ ಹೆಚ್ಚಿನ ಲಾಭಗಳಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ