ಮಾಹಿತಿಯಿಲ್ಲದೇ ಕೇಂದ್ರ ಸಚಿವರು ಮಾತನಾಡುವುದು ಸರಿಯಿಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜೂ.4-ರಾಜಕೀಯ ಬೇಡ ಎನ್ನುವವರು ರಾಜಕೀಯ ಬಿಟ್ಟು ರಾಜ್ಯದ ಯೋಜನೆಗಳಿಗೆ ನೆರವು ಒದಗಿಸುವುದು ಉತ್ತಮ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ಸದಾನಂದಗೌಡರಿಗೆ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಕೇಂದ್ರ ಸಚಿವ ಸದಾನಂದ ಗೌಡರು ಮಾಹಿತಿ ಇಲ್ಲದೆ ಮಾತನಾಡುವುದು ಕ್ಷೋಭೆ ಅಲ್ಲ. ಉದ್ದೇಶಿತ ಮೇಕೆದಾಟು ಯೋಜನೆಗೆ ಈಗಾಗಲೇ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದಿದ್ದಾರೆ.

ಬೆಂಗಳೂರು ನಗರದ ಸಬರ್ಬನ್ ಉಪನಗರ ರೈಲು ಯೋಜನೆ ಕುರಿತಂತೆ ಕಳೆದ ಫೆಬ್ರವರಿ ತಿಂಗಳಿನ ಮೊದಲ ವಾರದಲ್ಲೇ ಆಗಿನ ರೈಲ್ವೆ ಸಚಿವರಾಗಿದ್ದ ಪಿಯೂಶ್ ಗೋಯಲ್ ಅವರು ಸಭೆ ನಡೆಸಿ ಯೋಜನೆ ಅನುಷ್ಠಾನಕ್ಕಿರುವ ಎಲ್ಲ ತೊಡಕುಗಳನ್ನು ನಿವಾರಿಸುವ ಕುರಿತು ಚರ್ಚಿಸಿದ್ದರು.

ಅದರಂತೆ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಂದದ ಷರತ್ತುಗಳನ್ನು ಅನುಮೋದಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಈಗ ಆ ಚೆಂಡು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ನಿಜವಾಗಿಯೂ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ರಾಜಕೀಯ ಬೇಡ ಎಂಬ ರಾಜಕೀಯ ಬಿಟ್ಟು ರಾಜ್ಯದ ಯೋಜನೆಗಳಿಗೆ ನೆರವು ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ