ರಾಮಲಿಂಗಾರೆಡ್ಡಿ ಜಂಟಲ್‍ಮನ್ ರಾಜಕಾರಣಿ-ಶಾಸಕ ಎಚ್.ವಿಶ್ವನಾಥ್

ಬೆಂಗಳೂರು, ಜೂ.4- ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಅನ್ಯಾಯವಾಗುತ್ತಿದೆ ಎಂದು ಹೇಳಿರುವುದರಿಂದ ಕಾಂಗ್ರೆಸ್‍ನಲ್ಲಿ ಏನಾಗುತ್ತಿದೆ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎಚ್.ವಿಶ್ವನಾಥ್ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮತ್ತು ರಾಮಲಿಂಗಾರೆಡ್ಡಿ ಅವರು ಸಮಕಾಲೀನರು.ರಾಮಲಿಂಗಾರೆಡ್ಡಿ ಅವರು ಜಂಟಲ್‍ಮೆನ್ ರಾಜಕಾರಣಿ.ಅವರು ಏಳು ಬಾರಿ ಶಾಸಕರಾದವರು ಎಂದರು.

ರಾಮಲಿಂಗಾರೆಡ್ಡಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ನಾನು ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಜೊತೆಯಾಗಿ ಕೆಲಸ ಮಾಡಿದವರು. ಈಗ ಅಂಥವರು ಕಾಂಗ್ರೆಸ್‍ನಿಂದ ಅನ್ಯಾಯವಾಗುತ್ತಿದೆ ಎನ್ನುತ್ತಾರೆ. ಮಾಜಿ ಸಚಿವ ರೋಷನ್ ಬೇಗ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದವರು ಪಕ್ಷದ ಚುಕ್ಕಾಣಿ ಹಿಡಿಯದಿದ್ದರೆ ಇಂತಹ ಪರಿಸ್ಥಿತಿ ಮುಂದುವರೆಯುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ