ಬೆಂಗಳೂರು, ಜೂ.6-ಜಿಂದಾಲ್ ಕಂಪನಿಗೆ ಕೈಗಾರಿಕೆಗಾಗಿ ಭೂಮಿ ನೀಡುತ್ತಿರುವ ಸರ್ಕಾರದ ನಿರ್ಧಾರವನ್ನು ಕೆಲ ಸಚಿವರು ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಯು.ಟಿ.ಖಾದರ್, ಇದು ಸಂಪುಟದ ನಿರ್ಧಾರ. ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲ. ಕೈಗಾರಿಕಾಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.
ಮಾಜಿ ಸಚಿವರಾದ ಎಚ್.ಕೆ.ಪಾಟೀಲ್ ಹಾಗೂ ಮತ್ತಿತರರು ಯಾವ ಕಾರಣಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೋ ಗೊತ್ತಿಲ್ಲ. ಸಂಪುಟದ ನಿರ್ಧಾರವನ್ನು ನಾವು ಒಪ್ಪಬೇಕಿದೆ ಎಂದು ಹೇಳಿದರು.