ಕುಡಿದ ಅಮಲಿನಲ್ಲಿ ತಪ್ಪು ಮಾಡಿದೆ; ತನ್ನನ್ನು ಗಲ್ಲಿಗೇರಿಸಿ ಎಂದು ಕೋರ್ಟ್ ನಲ್ಲಿ ಮನವಿ ಮಾಡಿದ ಅತ್ಯಾಚಾರ ಆರೋಪಿ

ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ಅಪ್ರಾಪ್ತ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯೊಬ್ಬ ತಾನು ಮಾಡಿದ್ದು ತಪ್ಪು ಕುಡಿದ ಅಮಲಿನಲ್ಲಿ ತಪ್ಪುಮಾಡಿದೀಂದು ಅಲವೊತ್ತುಕೊಂಡಿದ್ದು, ತನ್ನನ್ನು ಗಲ್ಲಿಗೇರಿಸುವಂತೆ ಕೋರ್ಟ್ ಗೆ ಮನವಿ ಮಾಡಿದ ಘಟನೆ ನಡೆದಿದೆ.

ಕುಡಿದ ಅಮಲಿನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಮಾಡಿದ್ದೇನೆ. ತಪ್ಪು ನಡೆದು ಹೋಯಿತು. ನನ್ನ ತಪ್ಪನ್ನು ಒಪ್ಪಿಕೊಂಡಿದ್ದೇನೆ. ನನ್ನನ್ನು ನೇಣಿಗೇರಿಸಿ ಎಂದು 9 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ 32 ವರ್ಷದ ವಿಷ್ಣು ಪ್ರಸಾದ್ ಕೋರ್ಟ್ ಮುಂದೆ ಮೊರೆಯಿಟ್ಟಿದ್ದಾನೆ.

ಭೋಪಾಲ್‍ನಲ್ಲಿ ನಡೆದ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇವಲ 48 ಗಂಟೆಗಳಲ್ಲಿ ಮಧ್ಯಪ್ರದೇಶ ಪೊಲೀಸರು ಬೇಧಿಸಿದ್ದು, ಕಮಲ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ 108 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ವಿಶೇಷ ಪೋಕ್ಸೋ ಕೋರ್ಟ್ ನಲ್ಲಿ ಆರೋಪಿಯನ್ನು ಹಾಜರು ಪಡಿಸಲಾಗಿದ್ದು, ವಿಚಾರಣೆ ವೇಳೆ ನ್ಯಾಯಾಧೀಶರು ಆರೋಪಿಯನ್ನು ಈ ಕೃತ್ಯ ಎಸೆಗಲು ಕಾರಣ ಕೇಳಿದಾಗ, ನಾನು ಮದ್ಯದ ಅಮಲಿನಲ್ಲಿದ್ದೆ, ಆಗ ಇದೆಲ್ಲಾ ನಡೆದೋಯಿತು. ನನ್ನ ತಪ್ಪನ್ನು ಒಪ್ಪಿಕೊಂಡಿದ್ದೇನೆ. ನನ್ನನ್ನು ಗಲ್ಲಿಗೇರಿಸಿ ಎಂದು ಕೋರಿಕೊಂಡಿದ್ದಾನೆ. ಅಲ್ಲದೆ ಇದನ್ನು ಆಲಿಸಿದ ನ್ಯಾಯಾಧೀಶರು ಆತನನ್ನು ಜೈಲಿಗೆ ಕಳುಹಿಸಿ ಸದ್ಯ ಪ್ರಕರಣದ ವಿಚಾರಣೆಯನ್ನು ಮುಂದೂಡಿದ್ದಾರೆ.

ಪ್ರಕರಣದ ವಿಚಾರಣೆ ಅಂತ್ಯಗೊಳ್ಳುವವರೆಗೆ ಪ್ರಸಾದ್‍ನನ್ನು ಜೈಲಿಗೆ ಕಳುಹಿಸಲಾಗಿದ್ದು, ಆತ್ಮಹತ್ಯೆ ಸಾಧ್ಯತೆ ಇರುವ ಬಗ್ಗೆ ಪೊಲೀಸರು ಜಾಗ್ರತೆ ವಹಿಸಿದ್ದು, ಆರೋಪಿ ಪರ ಯಾವ ವಕೀಲರು ವಾದ ಮಂಡಿಸದ ಕಾರಣ ಕೋರ್ಟ್ ನಿಂದಲೇ ವಕೀಲರ ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ