ಮೈತ್ರಿ ಸರ್ಕಾರ ಸುಭದ್ರವಾಗಿದೆ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.14-ಸಮ್ಮಿಶ್ರ ಸರ್ಕಾರ ಭದ್ರವಾಗಿದೆ. ಯಾರು ಏನು ಬೇಕಾದರೂ ಭವಿಷ್ಯ ಹೇಳಿಕೊಳ್ಳಲಿ, ಆ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಸಚಿವ ಸಂಪುಟ ವಿಸ್ತರಣೆಗೂ ಮುನ್ನ ರಾಜಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಏನೇನೋ ಭವಿಷ್ಯ ಹೇಳಿದ ಹಲವರನ್ನು ನಾನು ಕಂಡಿದ್ದೇನೆ. ಅದ್ಯಾವುದೂ ನಿಜ ಆಗಿಲ್ಲ. ಸರ್ಕಾರ ಗಟ್ಟಿಯಾಗಿ ಉಳಿಯುತ್ತದೆ.ಭವಿಷ್ಯ ಹೇಳಿದಂತೆ ಸರ್ಕಾರ ಪತನವಾಗುವುದಿಲ್ಲ ಎಂದರು.

ಕಾಂಗ್ರೆಸ್‍ನಲ್ಲಿ ಹಿರಿಯರಿಗೆ, ಪ್ರಾಮಾಣಿಕರಿಗೆ ಅವಕಾಶ ಸಿಕ್ಕೇ ಸಿಗುತ್ತದೆ. ಸಮಯ ಬಂದಾಗ ಎಲ್ಲರೂ ತ್ಯಾಗ ಮಾಡಲೇಬೇಕಾಗುತ್ತದೆ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ