ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ನರೇಗಾ ಯೋಜನೆಯ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಲೋಕ ಕಲ್ಯಾಣ್​​​​​​​ ಮಾರ್ಗದ ನಿವಾಸದಲ್ಲಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ, ನರೇಗಾ ಯೋಜನೆಯ ಬಾಕಿ ಹಣವಾದ 1,950 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಬಳಿಕ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್​​​ ಶೇಖಾವತ್​ ಅವರನ್ನು ಭೇಟಿ ಮಾಡಲಿರುವ ಸಿಎಂ ಕುಮಾರಸ್ವಾಮಿ, ಮೇಕೆದಾಟು ಯೋಜನೆಯ ಬಗ್ಗೆ ಮಾತನಾಡುವ ಸಾಧ್ಯತೆಗಳಿವೆ. ರಾಜ್ಯ ಸರ್ಕಾರ ಈಗಾಗಲೇ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಡಿಪಿಆರ್​​​​​ ಸಲ್ಲಿಸಿದೆ. ಈ ಯೋಜನೆ ಮುಂದುವರಿಕೆ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

CM H D kumaraswamy,meet,PM narendra modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ