ಸ್ಕೂಟರ್‍ಗೆ ಡಿಕ್ಕಿ ಹೊಡೆದ ಟಾಟಾಏಸ್-ಘಟನೆಯಲ್ಲಿ ಸ್ಕೂಟರ್ ಸವಾರನ ಸಾವು

ಬೆಂಗಳೂರು, ಜೂ.16- ಸ್ಕೂಟರ್‍ಗೆ ಎದುರಿನಿಂದ ಬಂದ ಟಾಟಾಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ಲೋಹಿತ್ (28) ಮೃತಪಟ್ಟ ದುರ್ದೈವಿ.

ಈತ ಆಭರಣದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ಬೆಳಗ್ಗೆ 9.30ರಲ್ಲಿ ಲೋಹಿತ್ ಲುಂಬಿನಿ ಗಾರ್ಡನ್ ಎದುರು ಸರ್ವೀಸ್ ರಸ್ತೆಯಲ್ಲಿ ಸ್ಕೂಟರ್‍ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಟಾಟಾಏಸ್ ವಾಹನ ಡಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಈ ಸಂಬಂಧ ಹೆಬ್ಬಾಳ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟಾಟಾಏಸ್ ವಾಹನ ಚಾಲಕನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ