ವೈದ್ಯರು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಬೇಕು-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ. 17- ವೈದ್ಯರ ಮೇಲಿನ ಹಲ್ಲೆ ಸಮರ್ಥನೀಯ ಅಲ್ಲ, ಹಾಗೂ ವೈದ್ಯರು ಕೂಡ ಶಾಂತಿಯುತವಾಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.

ತಮ್ಮ ಖಾಸಗಿ ಖಾತೆಯಲ್ಲಿ ವೈದ್ಯರ ಮುಷ್ಕರ ಕುರಿತು ಟ್ವಿಟ್ ಮಾಡಿರುವ ಅವರು, ವೈದ್ಯರ ಮೇಲಿನ ಹಲ್ಲೆಯನ್ನು ಯಾರು ಒಪ್ಪುವುದಿಲ್ಲ, ನಾನು ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸುತ್ತೇನೆ ಎಂದಿದ್ದಾರೆ.

ವೈದ್ಯರು ಕರೆ ನೀಡಿರುವ ಪ್ರತಿಭಟನೆ ಶಾಂತಿಯುತವಾಗಿರಲಿ, ಯಾವುದೇ ಸಮಸ್ಯೆಗಳು ಸೃಷ್ಟಿಯಾಗದಂತಿರಲಿ ಮತ್ತು ರೋಗಿಗಳಿಗೆ ಯಾವುದೇ ತೊಂದರೆಯಾಗದಂತಿರಲಿ ಎಂದು ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ