ಕಸದ ರಾಶಿಯಲ್ಲಿ ಸ್ಪೋಟ-ಘಟನೆಯಲ್ಲಿ ನಾಲ್ವರು ಮಕ್ಕಳಿಗೆ ಗಾಯ

ಮುಝಫರ್‍ನಗರ್, ಜೂ.19-ಕಸದ ರಾಶಿಯಲ್ಲಿ ಸ್ಫೋಟ ಉಂಟಾಗಿ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮುಝಫರ್‍ನಗರ್ ಜಿಲ್ಲೆಯ ಪುರ್‍ಬಲ್ಯನ್ ಗ್ರಾಮದಲ್ಲಿ ಸಂಭವಿಸಿದೆ.

ಕಸದ ರಾಶಿಯಲ್ಲಿ ತ್ಯಾಜ್ಯಗಳ ರಾಸಾಯನಿಕ ಕ್ರಿಯೆಯಿಂದ ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಇನ್ನೊಂದು ಮೂಲಗಳ ಪ್ರಕಾರ ಪಟಾಕಿ ತಯಾರಿಕಾ ಕಾರ್ಖಾನೆಯ ತ್ಯಾಜ್ಯಗಳನ್ನು ಇಲ್ಲಿ ಸುರಿಯಲಾಗಿತ್ತು. ಕಸದ ರಾಶಿಯಲ್ಲಿನ ಬಿಸಿಯಿಂದಾಗಿ ಈ ಸ್ಫೋಟ ಸಂಭವಿಸಿದೆ.

ನಿನ್ನೆ ರಾತ್ರಿ ಕಸದ ರಾಶಿ ಬಳಿ ನಾಲ್ವರು ಮಕ್ಕಳು ಆಟವಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಇಂದು ತಿಳಿಸಿದ್ಧಾರೆ.

ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ನಡೆದ ಸ್ಥಳವು ಮನ್ಸೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ