ರೋಷನ್‍ಬೇಗ್ ಅಮಾನತುಗೊಳಿಸಿರುವುದು ನನಗೆ ಗೊತ್ತಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ, ಜೂ.19-ಶಾಸಕ ರೋಷನ್ ಬೇಗ್ ಅವರನ್ನು ಅಮಾನತುಗೊಳಿಸಿರುವುದು ನನಗೆ ಗೊತ್ತಿಲ್ಲ. ಕೆಪಿಸಿಸಿ ಶಿಫಾರಸು ಆಧರಿಸಿ ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಷನ್‍ಬೇಗ್ ಅವರು ಅಶಿಸ್ತನ್ನು ಪ್ರದರ್ಶಿಸಿದರು. ಪಕ್ಷದಲ್ಲಿ ಅಶಿಸ್ತನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಕುರಿತು ಅವರಿಗೆ ನೋಟೀಸ್ ಕೂಡ ನೀಡಲಾಗಿತ್ತು. ನೋಟೀಸ್‍ಗೆ ರೋಷನ್‍ಬೇಗ್ ಉತ್ತರ ಕೊಟ್ಟಿರಲಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ಕೆಪಿಸಿಸಿ ವರದಿ ಆಧರಿಸಿ ಹೈಕಮಾಂಡ್ ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ