ರಾಜ್ಯಸಭಾ ಸದಸ್ಯ ಮದಲ್ ಲಾಲ್ ಸೈನಿಯವರ ನಿಧನ ಹಿನ್ನಲೆ-ಬಿಜೆಪಿ ಸಂಸದೀಯ ಪಕ್ಷದ ಸಭೆ ರದ್ದು

ನವದೆಹಲಿ,ಜೂ.25- ಬಿಜೆಪಿ ರಾಜ್ಯಸಭಾ ಸದಸ್ಯ ಹಾಗೂ ಪಕ್ಷದ ರಾಜಸ್ಥಾನ ಘಟಕದ ಅಧ್ಯಕ್ಷ ಮದಲ್ ಲಾಲ್ ಸೈನಿ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ರದ್ದುಪಡಿಸಲಾಗಿದೆ.

ಇಂದು ಬೆಳಗ್ಗೆ ದೆಹಲಿಯಲ್ಲಿ ಬಿಜೆಪಿ ಪಾರ್ಲಿಮೆಂಟರಿ ಪಾರ್ಟಿ ಸಭೆ ನಡೆಯಬೇಕಿತ್ತು. ಆದರೆ ಸೈನಿ ಅವರ ನಿಧನದಿಂದ ಸಭೆಯನ್ನು ಮುಂದೂಡಲಾಗಿದೆ.

ಶ್ವಾಸಕೋಶದ ಸೋಂಕಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೈನಿ ನಿನ್ನೆ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ಚುನಾಯಿತ ಬಿಜೆಪಿ ಸಂಸದರು ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಬೇಕಿದ್ದ ಸಂಸದೀಯ ಸಭೆಯನ್ನು ಮುಂದೂಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ.

ಅಂತ್ಯಕ್ರಿಯೆ: ರಾಜಸ್ಥಾನದ ಶಿಖರ್‍ನಲ್ಲಿ ಸೈನಿ ಅವರ ಅಂತ್ಯಕ್ರಿಯೆ ನಡೆಯಿತು. ವಿವಿಧ ಪಕ್ಷಗಳ ಮುಖಂಡರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ಸೈನಿ ಅವರಿಗೆ ಅಂತಿಮಗೌರವ ಸಲ್ಲಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ