ಗ್ರಾಮವಾಸ್ತವ್ಯ ಮುಗಿಯುತ್ತಿದ್ದಂತೆ ಅಮೆರಿಕ ಪ್ರವಾಸಕ್ಕೆ ಸಿದ್ಧರಾದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಎಚ್​​ಡಿ ಕುಮಾರಸ್ವಾಮಿ ಅವರು ಇಂದು ಸಂಜೆ ಇಂದು ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಒಂದುವಾರಗಳ ಕಾಲ ಅವರು ಅಲ್ಲಿಯೇ ಉಳಿಯಲಿದ್ದಾರೆ.

ಹಾಂಗಂತ ಎಚ್​ಡಿಕೆ ಕುಟುಂಬ ಸಮೇತ ಹೋಗುತ್ತಿಲ್ಲ ಅಥವಾ ಯಾವುದೇ ಚಿಕಿತ್ಸೆಗೆ ಅಮೆರಿಕಕ್ಕೆ ತೆರಳುತ್ತಿಲ್ಲ. ಅವರು ಅಲ್ಲಿಗೆ ಪ್ರಯಾಣ ಬೆಳೆಸಲು ಮುಖ್ಯ ಕಾರಣ ಒಕ್ಕಲಿಗ ಪರಿಷತ್ ಆಯೋಜಿಸಿರುವ ಕಾರ್ಯಕ್ರಮ. ಹೌದು, ಅಮೆರಿಕ ಒಕ್ಕಲಿಗರ ಪರಿಷತ್ ಒಂದು ವಾರಗಳ ಕಾಲ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.  ಈ ಹಿನ್ನೆಲೆಯಲ್ಲಿ ಇಂದು ಸಂಜೆ 7.15ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಅಮೆರಿಕಕ್ಕೆ ತೆರಳಲಿದ್ದಾರೆ. ಜುಲೈ 8ರಂದು ಬೆಳಗ್ಗೆ ಬೆಂಗಳೂರಿಗೆ ವಾಪಾಸಾಗಲಿದ್ದಾರೆ

ಆದಿಚುಂಚನಗಿರಿ ಮಠದ ಶಿವನ ದೇವಸ್ಥಾನದ ಶಿಲಾನ್ಯಾಸ, ಜುಲೈ 4,5,6 ರಂದು ಒಕ್ಕಲಿಗ ಪರಿಷತ್​ನ ಸಮ್ಮೇಳನ ನಡೆಯಲಿದೆ. ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಕುಮಾರಸ್ವಾಮಿ ಅವರಿಗೆ ವಿಶೇಷ ಆಮಂತ್ರಣ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಬಿಡುವಿಲ್ಲದ ದಿನಚರಿ ಮಧ್ಯೆಯೂ ಅವರು ಬಿಡುವು ಮಾಡಿಕೊಂಡು ಅಮೆರಿಕಕ್ಕೆ ತೆರಳುತ್ತಿದ್ದಾರೆ.

ಕುಮಾರಸ್ವಾಮಿ ಅವರು ಯಾದಗಿರಿ, ರಾಯಚೂರು ಹಾಗೂ ಬೀದರ್​ನಲ್ಲಿ ಗ್ರಾಮವಾಸ್ತವ್ಯ ಮಾಡಿದ್ದರು. ಈ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ